ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಮಾಡುವರಿಗೆ ಸಾಲ ಸೌಲಭ್ಯ

0

ಹಾಸನ,ಅ.08(ಹಾಸನ್_ನ್ಯೂಸ್ ):- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಆನ್‍ಲೈನ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in ಇಲ್ಲಿ ನವೆಂಬರ್ 15 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು.

ನಿಗಮದ ಯೋಜನೆಗಳಿಗೆ ಅವಶ್ಯವಿರುವ ಸಾಮಾನ್ಯ ಅರ್ಹತೆಗಳು: ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ್‍ಕಾರ್ಡ್ ಹೊಂದಿರಬೇಕು.

ಸ್ವಯಂಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 3 ಲಕ್ಷ ರೂ.ಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ C.E.T/NEET  ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿ.ಎಚ್.ಡಿ., ಕೋರ್ಸ್‍ನಲ್ಲಿ  ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು.

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ 6 ಲಕ್ಷ ರೂ.ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.

ಸೂಚನೆ:- ಮಹಿಳೆಯರಿಗೆ ಶೇ.33ರಷ್ಟು ಮತ್ತು ವಿಶೇಷಚೇತನರಿಗೆ ಶೇ.5ರಷ್ಟು ಮೀಸಲಾತಿ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111ಗೆ ಸಂಪರ್ಕಿಸಬಹುದಾಗಿದೆ. ಹಾಗೂ ಇ-ಮೇಲ್: support.kacdc@karnataka.gov.inಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನುkacdc.karnataka.gov.in ಇಲ್ಲಿ ತಿಳಿಯಬಹುದಾಗಿದೆ. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‍ಗೆ ಜೋಡಣೆಯಾಗಿರಬೇಕು.

#creditfacilities #aryavaishya #hassan

LEAVE A REPLY

Please enter your comment!
Please enter your name here