ಕಲ್ಯಾಣ ಮಂಟಪದಲ್ಲಿ ಹೆಚ್ಚು ಜನ ಸೇರಿದರೆ ದಂಡ ವಿಧಿಸಿ: ಉಸ್ತುವಾರಿ ಕಾರ್ಯದರ್ಶಿ

0

ಕೋವಿಡ್19 ತಡೆಯಲು ಜನಸಂದಣಿ ನಿಯಂತ್ರಣ ಅನಿವಾರ್ಯವಾಗಿದ್ದು ವಿವಾಹ ಮತ್ತಿತರ ಸಮಾರಂಭಗಳ ಮೇಲೆ ನಿಗಾ ವಹಿಸುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಿಯಮ ಉಲ್ಲಂಘಿಸುವ ಕಲ್ಯಾಣ ಮಂಟಪ ಮೇಲೆ ದಂಡ ವಿಧಿಸಿ ಎಂದು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ನವೀನ್ ರಾಜ್ ಸಿಂಗ್ ನಿರ್ದೇಶನ ನೀಡಿದರು

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಿಂದ ಅಧಿಕಾರಿಗಳ ಸಭೆ ನಡೆಸಿದ ಅವರು ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ ಮಂಟಪ, ಸಮುದಾಯ ಭವನ ನಡೆಯುವ ಮದುವೆಗಳಲ್ಲಿ ಮತ್ತಿತರ ಸಮಾಂಭದಲ್ಲಿ 200 ಕ್ಕೂ ಅಧಿಕ ಜನ ಸೇರದಂತೆ ಮಿತಿಯನ್ನು ನಿರ್ವಹಿಸಲು ಮಾಲೀಕರಿಗೆ ನಿರ್ವಹಿಸಲು ನೋಟಿಸ್ ನೀಡಿ ಆದೇಶ ಪಾಲಿಸದಿದ್ದಲ್ಲಿ ದಂಡವನ್ನು ವಿಧಿಸಿ ಎಂದರು.

ನಗರದಲ್ಲಿ ಹೆಚ್ಚು ಜನಸಂದಣಿ ಸೇರದಂತೆ ನಿಯಂತ್ರಿಸಿ ಹಾಗೂ ಮಾಸ್ಕ್ ಬಳಸುವುದೇ ರಸ್ತೆಯಲ್ಲಿ ಓಡಾಡುವವರಿಗೆ ದಂಡ ಹಾಕಿ ಕೋವಿಡ್-19 ಹರಡುವುದನ್ನು ತಡೆಗಟ್ಟಲು ಎಲ್ಲಾರೀತಿಯ ಮುಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಇದಕ್ಕಾಗಿ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಸೂಚಿಸಿದರು

ತಾಲೂಕು ಆಸ್ಪತ್ರೆಗಲ್ಲಿ ಕೋವಿಡ್ ಚಿಕಿತ್ಸೆ ವ್ಯವಸ್ಥೆಗಳನ್ನು ಇನ್ನಷ್ಟು ಉತ್ತಮಪಡಿಸಿ ಕೋರ್ಟ್ ನಲ್ಲಿ ಪ್ರತಿದಿನ ಆಗಮಿಸುವ ಕಕ್ಷಿದಾರರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿ ಸಮರ್ಪಕವಾಗಿ ಒಳಪಡಿಸುವ ಕಾರ್ಯ ಸಮರ್ಪಕವಾಗಿ ನಡೆಯುತ್ತದೆಯೇ ನಡೆಯುತ್ತದೆ ಎಂದು ಉಪವಿಭಾಗಧಿಕಾರಿಗಳು ಪರೀಶಿಲನೆ ನಡೆಸಬೇಕು ಎಂದು ತಿಳಿಸಿದರು.

ಕೋವಿಡ್ ಔಷಧಿ ಶೀಘ್ರದಲ್ಲೇ ಜಿಲ್ಲೆಗೆ ತಲುಪಬಹುದು ಅದರ ಶೇಖರಣೆಗೆ ಹೆಚ್ಚುವರಿಯಾಗಿ ಘಟಕಗಳನ್ನು ಸ್ಥಾಪಿಸಿ ವಿತರಣೆಗಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹೇಳಿದರು.

ಬೇಸಿಗೆ ಕಾಲ ಆರಂಭವಾಗುತ್ತಿದ್ದು ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಿ ಎಲ್ಲಾ ಗ್ರಾಮಗಳಿಗೂ ಪೈಪ್‍ಲೈನ್ ಮೂಲಕವೇ ಕುಡಿಯುವ ನೀರು ಪೂರೈಕೆಯಾಗುವಂತೆ ಗಮನ ಹರಿಸಿ ಅನಿವಾರ್ಯ ವಿದ್ದಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಿ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಅತ್ಯಂತ ಶೀಘ್ರದಲ್ಲಿ ಪೂರ್ಣಗೊಳಿಸಿ ವಿದ್ಯುತ್ ಸಂಪರ್ಕ ಒದಗಿಸಿ ಎಂದು ಅವರು ನಿರ್ದೇಶನ ನೀಡಿದರು.

ಕೃಷಿಗೆ ಅಗತ್ಯವಿರುವ ಬಿತ್ತನೆ ಬೀಜ ರಸ ಗೊಬ್ಬರಗಳ ಪೂರೈಕೆ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಿ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರೆ ಪರಿಹಾರ ಶೀಘ್ರವಾಗಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ ಕೋವಿಡ್ ನಿಯಂತ್ರಿಸಲು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮವನ್ನು ವಿವರಿಸಿದರು. ಈಗಿನ ಮದುವೆ ಮ್ತತಿತ್ತರ ಸಮಾರಂಭದಲ್ಲಿ 200ರವರೆಗೆ ಜನರು ಮಾತ್ರ ಸೇರುವ ಅವಕಾಶವಿದ್ದು ನಿಯಮ ಉಲ್ಲಂಘಿಸಿ ಸಮಾರಂಭ ನೆಡೆಸುವ ಕಟ್ಟಡದ ಮಾಲೀಕರು ವಧುವರರ ಕುಟುಂಬದ ವಿರುದ್ದ ದಂಡ ವಿಧಿಸುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಅನುಷ್ಟಾನಕ್ಕೆ ಅಧಿಕಾರಿಗಳಿಗೆ ಸೂಚಿಸಿಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಣಾಧಿಕಾರಿ ಬಿ.ಎ ಪರಮೇಶ್ ಮಾತನಾಡಿ ಅಧಿಕಾರಿ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿರುವ ಕೋವಿಡ್ ಜಾಗೃತಿ ತಪಾಸಣೆ ಮತ್ತಿತ್ತರ ವಿಷಯದ ಬಗ್ಗೆ ತಿಳಿಸಿದರು

ಕೋವಿಡ್ ಚಿಕಿತ್ಸಾ ಸೌಲಭ್ಯ ಹಾಗೂ ಇತರ ಸೌಲಭ್ಯದ ಬಗ್ಗೆ ಹಿಮ್ಸ್ ನಿದೇಶಕರಾದ ಡಾ. ರವಿಕುಮಾರ್, ಆರೋಗ್ಯ ಮತ್ತು ಕುಟುಂಬಕಲ್ಯಾಣಧಿಕಾರಿ ಡಾ. ಸತೀಶ್ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ, ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಉಪವಿಭಾಗಧಿಕಾರಿ ಗಿರೀಶ್ ನಂದನ್ ಬಿ.ಎ ಜಗದೀಶ್ ಇತರರು ಹಾಜರಿದ್ದರು. ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here