ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಹೆಚ್. ಎಂ. ವಿಶ್ವನಾಥ್

0

ಕರ್ನಾಟಕ ವಿಧಾನ ಪರಿಷತ್ ಹಾಸನ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿ.ಜೆ.ಪಿ. ಪಕ್ಷದಿಂದ ಹೆಚ್.ಎಂ. ವಿಶ್ವನಾಥ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ಮಧ್ಯಾಹ್ನ 12.05 ರಿಂದ 12.15 ರ ನಡುವೆ ಜಿಲ್ಲಾ ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ 2 ಪ್ರತ್ಯೇಕ ನಾಮಪತ್ರ ಗಳನ್ನು ಸಲ್ಲಿಸಿದರು.

ಇದೇ ಸಂಧರ್ಭದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ, ಶಾಸಕರಾದ ಪ್ರೀತಂ. ಜೆ. ಗೌಡ, ಮಾಜಿ ಶಾಸಕರಾದ ಎ. ಮಂಜು, ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷರಾದ ರೇಣುಕುಮಾರ್ ಪಾಲ್ಗೊಂಡಿದ್ದರು.

ನಾಮಪತ್ರ ಸ್ವೀಕರಿಸಿದ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್. ಗಿರೀಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

ತಮ್ಮ ಪತ್ನಿ ಹಾಗೂ ಮೊಮ್ಮಗಳೊಂದಿಗೆ ಎರಡನೇ ನಾಮಪತ್ರ ಸಲ್ಲಿಸಿದರು.

LEAVE A REPLY

Please enter your comment!
Please enter your name here