ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳ ವನ್ನು ರದ್ದು

0

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜನಪದ ಕಲೆ ಸಂಸ್ಕೃತಿ ಪುನರುತ್ಥಾನಕ್ಕಾಗಿ ಕಳೆದ ನಾಲ್ಕು ದಶಕಗಳಿಂದ ಪ್ರತಿವರ್ಷ ಶೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ರಾಜ್ಯಮಟ್ಟದ ಜಾನಪದ ಕಲಾ ಮೇಳ ವನ್ನು ಏರ್ಪಡಿಸುತ್ತಿದೆ.

ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ದಿನಾಂಕ 23 24 ಮತ್ತು 25 ಮೂರು ದಿನಗಳ ಕಾಲ ಹಮ್ಮಿಕೊಳ್ಳುತ್ತಿದ್ದು ಈ ಕಲಾಮೇಳದಲ್ಲಿ ರಾಜ್ಯಾದ್ಯಂತ ಆಗಮಿಸಿದ ಸುಮಾರು ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ಕಲಾವಿದರು ಪಾಲ್ಗೊಂಡು ಶ್ರೀ ಕ್ಷೇತ್ರದಲ್ಲಿ ಜಾನಪದ ಕಲಾ ಲೋಕವನ್ನೇ ಸೃಷ್ಟಿಸುತ್ತಾರೆ.

ಆದರೆ ಈ ವರ್ಷ ಕೊರೊನಾ ವೈರಸ್ ಇಡೀ ವಿಶ್ವಾದ್ಯಂತ ಹರಡಿ ಜನರ ಆರೋಗ್ಯವನ್ನು ಕಾಡುತ್ತಿದೆ. ಆದ್ದರಿಂದ ಜನರ ಆರೋಗ್ಯವನ್ನು ರಕ್ಷಿಸುವ ದೃಷ್ಟಿಯಿಂದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಬೇಕಿದೆ ರಾಜ್ಯಮಟ್ಟದ ಜಾನಪದ ಕಲಾ ಮೇಳವನ್ನು ಈ ವರ್ಷ ರದ್ದುಪಡಿಸಲಾಗಿದೆ.

LEAVE A REPLY

Please enter your comment!
Please enter your name here