ಕರೊನಾ ವೈರಸ್ ನಿಯಂತ್ರಣಕ್ಕಾಗಿ ಮೇ 10 ರಿಂದ ಮೇ 24 ರವೆರೆಗೆ ಕರ್ನಾಟಕವನ್ನು ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಘೋಷಿಸಿದ್ದಾರೆ.
![](https://hassananews.com/wp-content/uploads/2021/05/inshot_20210507_1953270645900998331593179179-1024x1024.jpg)
ಬರುವ ಸೋಮವಾರದಿಂದ 14 ದಿನ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಇರಲಿದೆ. ಇಂದು ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಯಡಿಯೂರಪ್ಪ ಮಾತನಾಡಿದರು.
ದಿನಸಿ, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾರಲು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಜಿಲ್ಲೆಯಿಂದ ಜಿಲ್ಲೆಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ತಳ್ಳುಗಾಡಿಯ ಮೂಲಕ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬಾರ್ಗಳ ಬಂದ್ ಮಾಡಲಾಗಿರುತ್ತದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮದ್ಯದ ಪಾರ್ಸಲ್ಗೆ ಅವಕಾಶ ಇರಲಿದೆ.
![](https://hassananews.com/wp-content/uploads/2021/05/inshot_20210507_1953409857147570081734211798-1024x1024.jpg)
ಕೈಗಾರಿಕೆ ಹಾಗೂ ಇನ್ನಿತರ ಕಟ್ಟಡ ಕಾಮಗಾರಿಗಳಿಗೆ ಹೊರಗಿನಿಂದ ಜನ ಬಂದು ಕೆಲಸ ಮಾಡುವುದಕ್ಕೆ ಅವಕಾಶ ಇಲ್ಲ. ಈ ಲಾಕ್ಡೌನ್ ತಾತ್ಕಾಲಿಕವಾಗಿದ್ದು ಕಾರ್ಮಿಕರು ವಲಸೆ ಹೋಗದಿರುವಂತೆ ಸಿಎಂ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮೆಟ್ರೋ ಕೂಡ ಬಂದ್ ಮಾಡಲಾಗಿರುತ್ತದೆ. ತುರ್ತು ಸಂದರ್ಭದಲ್ಲಿ ಮಾತ್ರ ಆಟೋ, ಟ್ಯಾಕ್ಸಿ ಬಳಸಲು ಅವಕಾಶ ನೀಡಲಾಗಿದೆ.
![](https://hassananews.com/wp-content/uploads/2021/05/inshot_20210507_1953582379166280644416448401-1024x1024.jpg)