ನಿಮ್ಮ ತಾಳೆಗರಿಯಲ್ಲಿ ಮುಂದಿನ ಪ್ರಧಾನಿ ಯಾರಾಬಹುದು ?? – ಕೋಡಿಶ್ರಿ ಮಠ , ಅರಸೀಕೆರೆ

0

ರಾಜ್ಯ ಸರ್ಕಾರದ ಕುರಿತು ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಾ ಇದೆ, ಏನು ಆಗಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ. ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಿಲ್ಲ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಭವಿಷ್ಯವನ್ನು ನುಡಿದಿದ್ದಾರೆ. , ಕೋಡಿಮಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಕುರಿತು ಸ್ಮಶಾನದಲ್ಲಿ ಪಿಶಾಚಿ ಕುಣಿದಂತೆ ಆಗ್ತಾ ಇದೆ, ಏನು ಆಗಲ್ಲ. ನೋಡೋರಿಲ್ಲ, ಕೇಳೋರಿಲ್ಲ, ಆನಂದ ಪಡುವವರಿಲ್ಲ. ರಾಜ್ಯ ಸರ್ಕಾರಕ್ಕೆ ಏನು ತೊಂದರೆಯಿಲ್ಲ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಪಾರ್ಲಿಮೆಂಟ್ ಎಲೆಕ್ಷನ್‌ ಆದ್ಮೇಲೆ ತೀರ್ಮಾನ ಆಗುತ್ತದೆ.

ಪಾರ್ಲಿಮೆಂಟ್ ಚುನಾವಣೆ ಬಂದಾಗ ಏನಾಗುತ್ತೆ, ದೇಶದಲ್ಲಿ ಯಾವ ಸರ್ಕಾರ ಬರುತ್ತೆ ಅಂತ ಹೇಳ್ತಿನಿ ಎಂದು ಕೋಡಿ ಮಠದ ಸ್ವಾಮೀಜಿ (Hassan Kodi mutt Shivananda Shivayogi Rajendra Swamiji prediction) ಹೇಳಿದರು. , ಮಳೆಗೇನೂ ಕೊರತೆ ಆಗೋದಿಲ್ಲ: ರಾಜ್ಯದಲ್ಲಿ ಮಳೆ ಬರುತ್ತೆ ತೊಂದರೆ ಏನಿಲ್ಲ. ಹಿಂದೆ ಒಂದು ಸಾರಿ ಮಳೆ ಬಂದಂತೆ ಇನ್ನೊಂದು ಸಾರಿ ಮಳೆ‌ ಬರುತ್ತದೆ. ಮಳೆಗೇನು ತೊಂದರೆ ಆಗಲ್ಲ, ಕಾಲ‌ ಹೇಳ್ತಿನಿ, ಅಷ್ಟೇ ಮಳೆ‌ ಬರುತ್ತದೆ. ಅನ್ನಕ್ಕೆ ತೊಂದರೆ ಆಗುವುದಿಲ್ಲ. ಇನ್ನು ವಿಪರೀತ ಮಳೆಯಾಗುವ ಲಕ್ಷಣ ಇದೆ, ಬೇಕಾದಷ್ಟು ಮಳೆ ಬರುತ್ತದೆ.

ಇನ್ನೂ ಮಳೆ, ಗುಡುಗು, ಭೂಮಿ ಬಿರುಕು ಆಗುವುದು, ದ್ವೇಷಗಳು ಹೆಚ್ಚುತ್ತವೆ, ಅಪಮೃತ್ಯು ಎಲ್ಲಾ ನಡೆಯುತ್ತದೆ. ಪ್ರಕೃತಿಯಿಂದಲೂ ಹಾನಿ ಇದೆ, ಶ್ರಾವಣದಲ್ಲೇ ಮಳೆಯ ಬಗ್ಗೆ ಎಲ್ಲರಿಗೂ ಗೊತ್ತಾಗುತ್ತದೆ. ಶ್ರಾವಣದ‌ ಮಧ್ಯಭಾಗದ ಮೇಲೆ ಕಾರ್ತಿಕದವರೆಗೂ ಮಳೆ ಆಗುತ್ತದೆ. ಮತ್ತೆ ಮಳೆಯಿಂದ ಅಪಾಯ ಆಗುವ ಲಕ್ಷಣಗಳಿವೆ ಎಂದು ತಿಳಿಸಿದರು. ,

LEAVE A REPLY

Please enter your comment!
Please enter your name here