ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ

0

ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ

ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯಕವಾಗಿರುವ ಹಿನ್ನೆಲೆಯಲ್ಲಿ, ಕೋವಿಡ್-19ರ ಎರಡನೇ ಅಲೆಯ ಸೋಂಕಿನ ಸರಪಳೆಯನ್ನು ಮುರಿಯುವ ಸಂಬಂಧ ವಿಪತ್ತು ನಿರ್ವಹಣೆ ಕಾಯ್ದೆ 2005ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಕೆಲವು ಆಯ್ದ ಚಟುವಟಿಕೆ ಕಾರ್ಯಚರಣೆಯನ್ನು ದಿನಾಂಕ 18.05.2021ರ ಬೆಳಗ್ಗೆ 6.00ಗಂಟೆಯಿಂದ ದಿನಾಂಕ: 24.05.2021ರ ಬೆಳಗ್ಗೆ 6.00 ಗಂಟೆಯ ವರಗೆ ನಿರ್ಭಂಧಿಸಿ ಮತ್ತು ಅನುಮತಿಸಿ ಹೊರಡಿಸಿರುವ ಆದೇಶದಂತೆ ಜಿಲ್ಲೆಯಲ್ಲ ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೊವಿಡ್-19ರ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ.

ಸರ್ಕಾರದ ಆದೇಶ ಸಂಖ್ಯೆ: ಆರ್‌ಡಿ 158 ಟಿಎನ್‌ಆರ್ 2020, ದಿನಾಂಕ: 09-05-2021ರಲ್ಲಿನ ಪರಿಷ್ಕೃತ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ 18.05.2021 ರಿಂದ ಜಾರಿಗೆ ಬರುವಂತೆ ದಿನಾಂಕ: 24.05.2021ರ ಬೆಳಗ್ಗೆ 6.00 ಗಂಟೆಯ ವರಗೆ ವಾರದ ಮೂರು ದಿನಗಳು ಅಂದರೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಉಲ್ಲೇಖ (1) & (2) ಮಾರ್ಗ ಸೂಚಿಯಲ್ಲಿ ವಿವರಿಸಿ ಚಟುವಟಕಗಳಗೆ ಬೆಳ್ಳಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಅನುಮತಿ ನೀಡಿ ಉಳಿದ ವಾರದ ದಿನಗಳಾದ ಮಂಗಳವಾರ,ಗುರುವಾರ, ಶನಿವಾರ ಮತ್ತು ಭಾನುವಾರಗಳಂದು ಸರ್ಕಾರದ ಮಾರ್ಗ ಸೂಚಿಯಂತೆ ಎಲ್ಲಾ ಹಾಲಿನ ಬೂತುಗಳು, ವೈದ್ಯಕೀಯ ಸೇವೆಗಳು ಹಾಗೂ ನ್ಯಾಯಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸುವುದು ಸೂಕ್ತವೆಂದು ನನಗೆ ಮನವರಿಕೆಯಾಗಿರುವುದರಿಂದ ಈ ಕೆಳಕಂಡಂತೆ ಆದೇಶಿಸಿದೆ.

-:ಆದೇಶ ಸಂಖ್ಯೆ:ಎಂ.ಎ.ಜಿ/892/2019-20 ದಿನಾಂಕ:18/05/2021:

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣದಿಂದ ಆರ್. ಗಿರೀಶ್, ಭಾ.ಆ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಹಾಸನ ಜಿಲ್ಲೆ, ಹಾಸನ ಆದ ನಾನು ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೂರೋನಾ ವೈರಸ್‌ನ ಎರಡನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ Disaster Management Act 2005 Section 24 ಹಾಗೂ ಸಿ.ಆರ್.ಪಿ.ಸಿ ಸೆಕ್ಷನ್ 144 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರೋನಾ ವೈರಸ್ (ಕೋವಿಡ್-19) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ದಿನಾಂಕ 18.05.2021 ರಿಂದ ಜಾರಿಗೆ ಬರುವಂತೆ ದಿನಾಂಕ: 24.05.2021ರ ಬೆಳಗ್ಗೆ 6.00 ಗಂಟೆಯ ವರಗೆ ವಾರದ ಮೂರು ದಿನಗಳು ಅಂದರೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಉಲ್ಲೇಖ (1) & (2) ಮಾರ್ಗಸೂಚಿಯಲ್ಲಿ ವಿವರಿಸಿರುವ ಚಟುವಟಿಕಗಳಿಗೆ ಬೆಳ್ಳಗೆ 6 ರಿಂದ 10 ಗಂಟೆಯವರೆಗೆ ಮಾತ್ರ ಅನುಮತಿ ನೀಡಿ ಉVದ ವಾರದ ದಿನಗಳಾದ ಮಂಗಳವಾರ,ಗುರುವಾರ, ಶನಿವಾರ ಮತ್ತು ಭಾನುವಾರಗಳಂದು ಸರ್ಕಾರದ ಮಾರ್ಗ ಸೂಚಿಯಂತೆ ಎಲ್ಲಾ ಹಾಲನ ಬೂತುಗಳು, ವೈದ್ಯಕೀಯ ಸೇವೆಗಳು ಹಾಗೂ ನ್ಯಾಯಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶಿಸಿದ.

ನಿಷೇದಾಜ್ಞೆ ಅವಧಿಯಲ್ಲಿ ಸರಕು ಸಾಗಾಟದ ವಾಹನಗಳನ್ನು ಹೊರತುಪಡಿಸಿ ಯಾವುದೇ ವಾಹನಸಂಚಾರ ಹಾಗೂ ವ್ಯಕ್ತಿಗಳ ಓಡಾಟ ಕಂಡುಬಂದಲ್ಲ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here