
ತಾಲೂಕಿನ ತಟ್ಟೆಕೆರೆ ಗ್ರಾಮದ ಆದರ್ಶ ವಿದ್ಯಾಲಯ ಸಮೀಪ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮಂಜೇಗೌಡ(೫೨) ಎಂಬುವರು ಮೃತಪಟ್ಟಿದ್ದಾರೆ. ತಾಲೂಕಿನ ಗದ್ದೆಹೊಸೂರು ಗ್ರಾಮದ ಮಂಜೇಗೌಡ ಅವರು ವೈಯಕ್ತಿಕ ಕೆಲಸದ ಮೇಲೆ ಪಟ್ಟಣಕ್ಕೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ನಡೆದಿರುವ ಅಪಘಾತದಲ್ಲಿ ಮಂಜೇಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಸೆöÊ ವಿನಯ್ ಕುಮಾರ್ ಸ್ಥಳ ಮಹಜರು ನಡೆಸಿ, ಪ್ರಕರಣ ದಾಖಲಿಸಿದ್ದಾರೆ.