ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್.:ಓರ್ವ ಮಹಿಳೆ ಸೇರಿದಂತೆ
ಮೂವರ ದುರ್ಮರಣ:

0

ಬೇಲೂರು ಸುದ್ದಿ:

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್.:ಓರ್ವ ಮಹಿಳೆ ಸೇರಿದಂತೆ
ಮೂವರ ದುರ್ಮರಣ:

ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸಕ್ಕಾಗಿ ಚಲಿಸುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೋಲಿಸ್ ಠಾಣಾ ವ್ಯಾಪ್ತಿ ಚೀಕನಹಳ್ಳಿ ಬಳಿ ನಡೆದಿದೆ.

ಬೆಂಗಳೂರಿನಿಂದ ಹಾಸನ ಬೇಲೂರು ಮೂಡಿಗೆರೆ ಮಾರ್ಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ 4.45.ರ ಸುಮಾರಿಗೆ ಪ್ರಪಾತಕ್ಕೆ ಉರುಳಿದೆ.
ಬಸ್ಸಿನಲ್ಲಿ 48 ಪ್ರಯಾಣಿಕರಿದ್ದು,ಒಂದು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು,ಉಳಿದ 6 ಮಂದಿಗೆ ಗಂಭೀರ ಗಾಯಗಳಾಗಿದ್ದು,ಹೆಚ್ಚಿನ ಚಿಕಿತ್ಸೆಗಾಗಿ

ಗಾಯಾಳುಗಳನ್ನು ಮೂಡಿಗೆರೆ ಹಾಗೂ ಬೇಲೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು ಪ್ರಕರಣ ಗೋಣಿಬೀಡು ಠಾಣೆಯಲ್ಲಿ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here