Arkalgud

ಟಾಟಾ ಏಸ್‌ಗೆ ಬೈಕ್‌ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

By Hassan News

December 07, 2022

ಹಾಸನ / ಕೊಡಗು : ಹಾಸನ ಜಿಲ್ಲೆಯ ಅರಕಲಗೂಡು ವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. , ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಎಂ.ಜಿ.ರಸ್ತೆಯ ನಿವಾಸಿಗಳಾದ ಉಮ್ಮರ್ (47) ಮತ್ತು ಮೂರ್ತಿ (39) ಮೃತ ದುರ್ದೈವಿಗಳು., ಮೂರ್ತಿಯ ಕೈ ಚಿಕಿತ್ಸೆಗೆಂದು ಹಾಸನ ಜಿಲ್ಲೆಯ ಅರಕಲಗೂಡಿಗೆ ಬೈಕಿನಲ್ಲಿ ತೆರಳಿದ ಇಬ್ಬರು ಹಿಂತಿರುಗಿ ಬರುತ್ತಿದ್ದ ಸಂದರ್ಭ

ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ಇಬ್ಬರು ಸವಾರರ ತಲೆಗೆ ತೀವ್ರ ಪೆಟ್ಟು ಬಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ., ಇವರು ಕೊಡಗು ಜಿಲ್ಲೆಯ

ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಅರಕಲಗೂಡಿನಿಂದ ವಾಪಸ್ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ರೋಡ್ ಹಂಪ್ ಕಾಣದೆ ಡಿಕ್ಕಿ ಬೈಕ್ ನಿಯಂತ್ರಣ

ತಪ್ಪಿ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ , ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .