
ಕರ್ನಾಟಕ ಹೈಕೋರ್ಟ್ ನೀಡಿದ್ದ ಅನರ್ಹತೆ ಆದೇಶಕ್ಕೆ ಸುಪ್ರೀಂಕೋರ್ಟ್ 4 ವಾರಗಳವರೆಗೆ ತಾತ್ಕಾಲಿಕ ತಡೆಯನ್ನು ನೀಡಿದೆ. ಧನಂಜಯ್ ಚಂದ್ರಚೂಡ್, ಪರಡಿವಾಲಾ, ಮನೋಜ್ ಮಿಶ್ರಾ ಮೂವರು ನ್ಯಾಯಾಧೀಶರಿದ್ದ ಪೀಠದಿಂದ ತಡೆಯಾಜ್ಞೆ ಆದೇಶ ಹೊರಡಿಸಲಾಗಿದ್ದು, ಸದ್ಯ ಅನರ್ಹತೆಯಿಂದ ಪ್ರಜ್ವಲ್ ಪಾರಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಅವಕಾಶ ಲಭಿಸಿದೆ.