ಹಾಸನ/ಕೊಡಗು : ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ತಾಯಿಯ ಸಂಕಷ್ಟ ನೋಡಲಾಗದೆ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

0

ಶರತ್ ಕುಮಾರ್ (30) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಕೊಡಗು ಜಿಲ್ಲೆ ಶನಿವಾರಸಂತೆ ಸಮೀಪದ ಮಾದರೆ ಗ್ರಾಮದವರಾದ ಶರತ್, ಬೆಂಗಳೂರಿನ ರಿಲಾಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕೆಲಸ ತೊರೆದು ಊರಿಗೆ ಬಂದಿದ್ದರು., ಎನ್ನಲಾಗಿದೆ

ಮೃತನ ತಾಯಿಗೆ ಕೋವಿಡ್ ಸೋಂಕು ತಗುಲಿರುವ ಕಾರಣ ಹಾಸನದ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 11 ದಿನಗಳಿಂದ ಚಿಕಿತ್ಸೆ ನೀಡಲಾಗ್ತಿದೆ. ತಾಯಿ ಆಸ್ಪತ್ರೆಯಲ್ಲಿ ಅನುಭವಿಸುತ್ತಿರುವ ನೋವಿನಿಂದ ನೊಂದು ಶರತ್ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here