ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಹೋಬಳಿಯ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 22 ನೂತನ ವಧು ವರರನ್ನು ಆಶೀರ್ವಚನ
![](https://hassananews.com/wp-content/uploads/2021/02/FB_IMG_1614074772477.jpg)
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಹೋಬಳಿಯ ಕಬ್ಬಳಿ ಶ್ರೀ ಬಸವೇಶ್ವರಸ್ವಾಮಿ ದೇವಸ್ಥಾನದಲ್ಲಿ ಆದಿಚುಂಚನಗಿರಿ ಶಾಖಾ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 22 ನೂತನ ವಧು ವರರನ್ನು ಆಶೀರ್ವದಿಸಿದರು
![](https://hassananews.com/wp-content/uploads/2021/02/FB_IMG_1614074796777-1024x576.jpg)
*ಚನ್ನರಾಯಪಟ್ಟಣ ತಾಲೂಕು ಶ್ರೀಕ್ಷೇತ್ರ ಕಬ್ಬಳಿ ಬಸವೇಶ್ವರಸ್ವಾಮಿ ಸನ್ನಿಧಿಯಲ್ಲಿ ಆಯೋಜಿಸಲಾಗಿದ್ದ *ಸಾಮೂಹಿಕ ಉಚಿತ ವಿವಾಹ ಮಹೋತ್ಸವ*
![](https://hassananews.com/wp-content/uploads/2021/02/FB_IMG_1614074803579-1024x461.jpg)
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು* ದಿವ್ಯ ಸಾನಿಧ್ಯವನ್ನು ವಹಿಸಿ ವಧು-ವರರಿಗೆ ಆಶೀರ್ವದಿಸಿ ಆಶೀರ್ವಚನ ನೀಡಿದರು.
![](https://hassananews.com/wp-content/uploads/2021/02/FB_IMG_1614074799087-1024x461.jpg)
ಈ ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಊರಿನ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.
![](https://hassananews.com/wp-content/uploads/2021/02/FB_IMG_1614074794695-576x1024.jpg)
ಇದೇ ಸಂದರ್ಭದಲ್ಲಿ ಪೂಜ್ಯ ಮಹಾಸ್ವಾಮೀಜಿಯವರು ಶ್ರೀ ಬಸವೇಶ್ವರ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
![](https://hassananews.com/wp-content/uploads/2021/02/FB_IMG_1614074791703.jpg)