ಪೂರಕ ಪೌಷ್ಠಿಕ ಆಹಾರವನ್ನು ಮನೆಗಳಿಗೇ ತಲುಪಿಸಿ: ಆರ್. ಗಿರೀಶ್

0

ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬರದೇ ಇರುವುದರಿಂದ, ಪೋಷಣ್ ಅಭಿಯಾನದಲ್ಲಿ ನೀಡಲಾಗುವ ಪೂರಕ ಪೌಷ್ಠಿಕ ಆಹಾರವನ್ನು ಮನೆಗಳಿಗೇ ತಲುಪಿಸಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಪೋಷಣ್ ಅಭಿಯಾನದ ಕುರಿತು 2 ನೇ ತ್ರೈಮಾಸಿಕ ಸಭೆ ನಡೆಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಈ ಯೋಜನೆಯ ಸೌಲಭ್ಯಗಳು ಪೂರಕವಾಗಿ ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ತಪ್ಪದೇ ದೊರಕಬೇಕು ಎಂದು ಅವರು ಹೇಳಿದರು.
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು ಮನೆ ಮನೆಗೆ ಭೇಟಿ ನೀಡಿ ಮಕ್ಕಳ ಬೆಳವಣಿಗೆ ಮಾಪನವನ್ನು ನಿರ್ವಹಿಸಬೇಕು. ಅಪೌಷ್ಠಿಕತೆಯ ಕಾರಣದಿಂದಾಗಿ ಕಡಿಮೆ ತೂಕ ಮತ್ತು ಎತ್ತರ ಕುಬ್ಜತೆ ಹಾಗೂ ಇತರೆ ನೂನ್ಯತೆಗಳಿಗೆ ಮಕ್ಕಳು ಒಳಗಾಗಬಾರದು. ಈ ನಿಟ್ಟಿನಲ್ಲಿ ಪೋಷಣ್ ಅಭಿಯಾನದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಯೋಜನೆಯ ಸೌಲಭ್ಯ ದೊರಕಬೇಕಿದ್ದು, ಶಾಲೆ ಬಿಟ್ಟ ಕಿಶೋರಿಯರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪಡೆದು, ಎಲ್ಲಾ ಅರ್ಹರಿಗೂ ಅವರ ಮನೆಗಳಿಗೇ ಕಚ್ಚಾ ಆಹಾರ ಪದಾರ್ಥಗಳನ್ನು ಕಳುಹಿಸಿ ಕೊಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಕಟ್ಟಡ ಕಾರ್ಮಿಕರ ಮಕ್ಕಳಲ್ಲಿ ಅಪೌಷ್ಠಿಕಯ ಪ್ರಮಾಣ ಹೆಚ್ಚಾಗಿದ್ದು, ಅವರು ಕೆಲಸ ಮಾಡುವ ಸ್ಥಳದ ಸಮೀಪದಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ನೊಂದಾಯಿಸಿಕೊಂಡು, ಪೂರಕ ಪೌಷ್ಠಿಕ ಆಹಾರ ದೊರಕುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಇತರೆ ಇಲಾಖೆಗಳ ಸಹಕಾರ ಪಡೆದು ಪೋಷಣ್ ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಕಾರ್ಮಿಕರ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಅಗತ್ಯ ಚಿಕಿತ್ಸಾ ಸೌಲಭ್ಯಗಳ ಅವಶ್ಯಕತೆ ಇದೆ. ಅಂತಹವರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ತೋಟಗಾರಿಕೆ ಇಲಾಖೆಯಿಂದ ಹಣ್ಣು ಹಾಗೂ ತರಕಾರಿಗಳ ಬೀಜಗಳನ್ನು ಪಡೆದು, ಅಂಗನವಾಡಿ ಕೇಂದ್ರಗಳಲ್ಲಿಯೇ ಬೆಳೆಯಲು ಉತ್ತೇಜನ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ನಿರೂಪಣಾಧಿಕಾರಿಗಲಾದ ಮಲ್ಲೇಶ್ ಅವರು ಪೋಷಣ್ ಅಭಿಯಾನದಲ್ಲಿ ಕೈಗೊಳ್ಳಲಾಗಿರುವ ಕಾರ್ಯಕ್ರಮಗಳು ಹಾಗೂ ಇತರೆ ಕ್ರಮಗಳ ಬಗ್ಗೆ ವಿವರಣೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ್ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here