ಹಾಸನದಲ್ಲಿ ಇಂದು ನಾಳೆ ಕೂಡ ಮುಂದುವರಿದ ಜಿಟಿಜಿಟಿ ಮಳೆ ಜೊತೆಗೆ ಚಳಿಯ ವಾತಾವರಣ

0

ಬೆಂಗಳೂರು / ಹಾಸನ : ನವೆಂಬರ್ ತಿಂಗಳ ದೀಪಾವಳಿ ಕಳೆದು ಇನ್ನೇನು ಚುಮು ಚುಮು ಚಳಿ ಆರಂಭವಾಗಬೇಕೆನ್ನುವಷ್ಟರಲ್ಲಿ ರಾಜಧಾನಿ ಬೆಂಗಳೂರು ಸೇರಿ ಹಾಸನದಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಮನೆಯಲ್ಲಿ ಕುಳಿತು ಕಚೇರಿ ಕೆಲಸ ಮಾಡಲು ಸಾಧ್ಯವಿರುವವರು ಬಿಸಿ ಬಿಸಿ ಕಾಫಿ-ಟೀ ಹೀರುತ್ತಾ ಬೆಚ್ಚಗೆ ಮನೆಯೊಳಗಿದ್ದರೆ ಕಚೇರಿಗಳಿಗೆ, ಹೊರಗೆ ಕೆಲಸಗಳಿಗೆ ಹೋಗಬೇಕಾದವರು, ಶಾಲೆ-ಕಾಲೇಜುಗಳಿಗೆ ಹೋಗಬೇಕಾದ ಮಕ್ಕಳಿಗೆ ಮಳೆಯಲ್ಲಿಯೇ ಜರ್ಕಿನ್, ಸ್ವೆಟರ್ ಹಾಕಿಕೊಂಡು ಓಡಾಡಬೇಕಾದ ಪರಿಸ್ಥಿತಿ ಎದುರಾಗಿದ್ದು . , ಶೀತ ಕೆಮ್ಮು , ಜ್ವರ ದಲ್ಲಿ ಬಳಲುತ್ತಿರುವವರಿಗೆ ಬೇಸರ ತಂದಿದೆ ಈ ವಾತಾವರಣ.

ಹಾಸನದಲ್ಲಿ ಇಂದು ಕನಿಷ್ಠ 19’c ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದರೆ ಗರೀಷ್ಠ 22’c ಮೋಡ ಕವಿದ ವಾತಾವರಣ ಇರಲಿದೆ. ಇನ್ನೂ ಮೂರು ದಿನಗಳವರೆಗೆ ಇದೇ ರೀತಿ ತುಂತುರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜೊತೆಗೆ ಚಳಿಯೂ ಇದ್ದು ಹಲವು ಕಡೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. , ಕೆಲವು ಆಸ್ಪತ್ರೆ ಗಳಲ್ಲಿ ರೋಗಿಗಳ ಸಂಖ್ಯೆ ಯು ತುಂಬುತ್ತಿರೋದು ವಿಪರ್ಯಾಸ

ಹಾಸನ ಬೆಂಗಳೂರಲ್ಲಿ ಆರೆಂಜ್ ಅಲರ್ಟ್: ಇನ್ನು ಮೂರ್ನಾಲ್ಕು ದಿನ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತು ಬೆಂಗಳೂರು ಸುತ್ತಮುತ್ತ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರಿಯಲಿದ್ದು ವಾಹನ ಸವಾರರು ವಾಹನ ಚಲಾಯಿಸುವಾಗ ತೀವ್ರ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಈ ತುಂತುರು ಮಳೆ ಉಂಟಾಗುತ್ತಿದ್ದು, ತಮಿಳುನಾಡಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯ ಅಬ್ಬರಕ್ಕೆ ತಮಿಳುನಾಡಿನಲ್ಲಿ 14 ಜನರು ಮೃತಪಟ್ಟಿದ್ದಾರೆ ಎನ್ನಲಾಗಿದೆ

ಮುಂದಿನ 48 ಗಂಟೆಗಳ ಕಾಲ ಹಾಸನ ಸೇರಿ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

#weathereporthassan

LEAVE A REPLY

Please enter your comment!
Please enter your name here