ಹಾಸನಾಂಬ ಜಾತ್ರಾ ಮಹೋತ್ಸವ: ಪೂರ್ವ ಸಿದ್ದತೆಗೆ ಸೂಚನೆ

0

ಹಾಸನ ಅ. :  ಹಾಸನಾಂಬ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ಸ್ವಚ್ಚತೆ, ರಸ್ತೆಗಳ,ಗುಂಡಿ ಮುಚ್ಚುವ ಕೆಲಸವನ್ನು ಅ.25 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ದತಾ ಸಭೆ ನಡೆಸಿ ಮಾತನಾಡಿದ ಅವರು ಹೂವಿನ ಅಲಂಕಾರ,ದೀಪಾಲಂಕಾರ,ಬ್ಯಾರಿಕೆಡ್ ಕುರಿತು ಟೆಂಡರ್ ಕರೆದು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರವನ್ನು ಆಕರ್ಷಕವಾಗಿ ಮಾಡುವುದರ ಜೊತೆಗೆ ಕೋವಿಡ್ ಲಸಿಕೆ ಪಡೆಯಿರಿ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವ ಎಂಬ ವ್ಯಾಕ್ಯಗಳನ್ನು ವಿದ್ಯುತ್ ದೀಪಗಳಿಂದ ಮೂಡಿಬರುವಂತೆ ವ್ಯವಸ್ಥಿತವಾಗಿ ಮಾಡಿಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ  ಸೂಚಿಸಿದರು.

ಆಹ್ವಾನ ಪತ್ರಿಕೆ, ಜಾತ್ರಾ ಮಹೋತ್ಸವದಲ್ಲಿ ಅಧಿಕಾರಿ, ಸಿಬ್ಬಂದಿಗಳು ಮಾಧ್ಯಮದವರಿಗೆ ಹಾಗೂ ಪೂಜೆ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಪಾಸ್ ವಿತರಣೆಗಾಗಿ ಮುದ್ರಣಕ್ಕೆ ಕ್ರಮವಹಿಸಲು ಉಪ ವಿಭಾಗಾಧಿಕಾರಿ ಹಾಗೂ ಹಾಸನಾಂಬ ದೇವಸ್ಥಾನದ ಆಡಳಿತಾಧಿಕಾರಿ ಬಿ.ಎ ಜಗದೀಶ್ ಅವರಿಗೆ  ತಿಳಿಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ನಗರಸಭೆ ಆಯುಕ್ತರಾದ ಕೃಷ್ಣ ಮೂರ್ತಿ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಸಂಜಯ್  ಹಾಗೂ ಮತ್ತಿತರರು  ಹಾಜರಿದ್ದರು.

LEAVE A REPLY

Please enter your comment!
Please enter your name here