ಕೇವಲ 23 ವರ್ಷದ ನಂದಿತ ನೇಣಿಗೆ ಶರಣಾಗಿದ್ದೇಕೆ …

0

ಹಾಸನ : ಎರಡು ತಿಂಗಳ ಹಿಂದೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಎಂಬಾತನಿಗೆ ಈ ನಂದಿತಾಳಿಗೆ ವಿವಾಹ ಮಾಡಿಕೊಡಲಾಗಿತ್ತು. ,

ಎರಡು ತಿಂಗಳ ಹಿಂದೆ ವಿವಾಹವಾಗಿತ್ತು ಅಷ್ಟೇ ನಂದಿತಾ ಎಂಬ ಯುವತಿಯೊಬ್ಬಳು ಇಂದು ಜುಲೈ 22 ಶನಿವಾರ 2023 ಬೆಳಗ್ಗೆ ನೇಣಿಗೆ ಶರಣಾದ ಘಟನೆ ತಾಲೂಕಿನಲ್ಲಿ ನಡೆದಿದೆ ., ತಾಲೂಕಿನ ಬಾಳ್ಳುಪೇಟೆ ಸಮೀಪದ ಬಂಧಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದ ನಂದಿತ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾಳೆ.

, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪೊಲೀಸರ ತನಿಖೆಯಿಂದಷ್ಟೇ ಸತ್ಯ ಹೊರ ಬರಬೇಕಿದೆ. , ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿರುತ್ತದೆ.

LEAVE A REPLY

Please enter your comment!
Please enter your name here