ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

0

ಹಾಸನ: ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯ ಯುವ ನೀತಿ-2012ರ ಅನ್ವಯ, ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದ್ದು, ಈ ಯೋಜನೆಯ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಹಾಸನ, ಚನ್ನರಾಯಪಟ್ಟಣ ಮತ್ತು ಅರಕಲಗೂಡು ತಾಲೂಕುಗಳಲ್ಲಿ ಖಾಲಿಯಿದ್ದು, ಯುವಕ-ಯುವತಿಯರು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 21 ರಿಂದ 35 ವಯಸ್ಸಿನ ಒಳಗಿರಬೇಕು. ಕನ್ನಡ ಸ್ಪಷ್ಟವಾಗಿ ಮಾತನಾಡಲು ಹಾಗೂ ಬರೆಯಲು, ಕೌಶಲ್ಯ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಹಾಸನ, ಚನ್ನರಾಯಪಟ್ಟಣ ಮತ್ತು ಅರಕಲಗೂಡು ತಾಲ್ಲೂಕುಗಳ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ, ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳನ್ನು ಜೂ. 16 ರಂದು ಸಾಯಂಕಾಲ 5 ಘಂಟೆ ಒಳಗಾಗಿ ಖುದ್ದಾಗಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸ್ಪಂದನ ಕೇಂದ್ರಕ್ಕೆ ಸಲ್ಲಿಸಬಹುದಾಗಿದ್ದು, yuvaspandana.hassan@gmail.com ಅಥವಾ ನಮೂದಿಸಿರುವ ಮೊಬೈಲ್ ಸಂಖ್ಯೆಗಳ whatsapp ಮೂಲಕ ಸಲ್ಲಿಸಬಹುದಾಗಿದೆ ಎಂದು ಹಾಸನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ: 08172-245056, ಯುವ ಸಮಾಲೋಚಕಿ ತನುಜ ವಿ ಎಮ್ 8296511200, ಕ್ಷೇತ್ರ ಸಂಪರ್ಕಾಧಿಕಾರಿ ನಾಗರತ್ನ 8088488688 ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here