ಹಾಸನ.ನ.1(ಹಾಸನ್_ನ್ಯೂಸ್):- ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಪಿ.ಎಸ್.ಐ. ದಿ|| ಕಿರಣ್ ಅವರ ಕುಟುಂಬಕ್ಕೆ 2 ಲಕ್ಷ ರೂ. ಗಳ ಚೆಕ್ನ್ನು ಹಸ್ತಾಂತರಿಸಿದರು.
![](https://hassananews.com/wp-content/uploads/2020/11/FB_IMG_1604223282394.jpg)
ನಗರದ ಸರ್ಕಾರಿ ಅತಿಥಿ ಗೃಹದಲ್ಲಿಂದು ಕಿರಣ್ ಅವರ ಕುಟುಂಬದವರನ್ನು ಭೇಟಿ ಮಾಡಿದ ಸಚಿವರು ಮಕ್ಕಳ ವಿದ್ಯಾಬ್ಯಾಸಕ್ಕಾಗಿ ವೈಯಕ್ತಿಕವಾಗಿ ಈ ಸಹಾಯವನ್ನು ಮಾಡಲಾಗುತ್ತಿದ್ದು,
![](https://hassananews.com/wp-content/uploads/2020/11/IMG_20201101_150306_881.jpg)
ಮುಂದಿನ ದಿನಗಳಲ್ಲಿ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿದರು.