ಹಾಸನದಲ್ಲಿಂದು ಕೇಂದ್ರ ಇಂಧನ ಮತ್ತು ಭಾರಿ ಕೈಗಾರಿಕಾ ಖಾತೆ ರಾಜ್ಯ ಸಚಿವ ಕೃಷ್ಣ ಪಾಲ್ ಗುರ್ಜರ್

0

ಹಾಸನ : ನಗರದ ಪುರಾತನ ದೇವಾಲಯಹಾಸನಾಂಬ ದೇವಾಲಯದ ಆವರಣದಲ್ಲಿ ಇರುವ ಸಿದ್ದೇಶ್ವರ ದೇವಾಲಯದಲ್ಲಿ , ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ(5ಜುಲೈ2022) ವಿಶೇಷ ಪೂಜೆ ಸಲ್ಲಿಸ ಜಿಲ್ಲಾ ಪ್ರವಾಸಕ್ಕೆ ಚಾಲನೆ ನೀಡಿದರು., ಅವರು ಹಾಸನಕ್ಕೆ ಬಂದ ವಿಷಯ ?

” ವಿಶ್ವ ಹಾಗೂ ದೇಶದಲ್ಲಿ ಮೋದಿ ಜನಪ್ರಿಯತೆ ಹೆಚ್ಚುತ್ತಿದೆ. 2024 ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲೂ ಬಿಜೆಪಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಕಟ್ಟಲಾಗುವುದು. ಇದಕ್ಕಾಗಿಯೇ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಗಳ ನಾ ಇಲ್ಲಿ ಹಮ್ಮಿಕೊಂಡಿದ್ದು‌, ವಿಶೇಷವಾಗಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಜನೋಪಯೋಗಿ ಯೋಜನೆಗಳ ಲಾಭ ಎಷ್ಟು ಮಂದಿಗೆ ತಲುಪಿದೆ ಎಂಬುದರ ಬಗ್ಗೆ ಖಚಿತ ಮಾಹಿತಿ ಪಡೆಯಲಾಗುವುದು.  , ಫಲಾನುಭವಿಗಳ ಬಳಿ ತೆರಳಿ ಯೋಜನೆಯಿಂದ ಆಗಿರುವ ಪ್ರಯೋಜನದ ಬಗ್ಗೆ ತಿಳಿಯಲಾಗುವುದು. ಈ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡುವ ಕೆಲಸ ಮಾಡಲಾಗುವುದು ” ಎಂದರು

ಈ ಸಂದರ್ಭದಲ್ಲಿ ಸ್ಥಳೀಯ ಶಾಸಕ ಪ್ರೀತಂ ಗೌಡ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಸಿಇಒ ಕಾಂತರಾಜು, ಎಚ್.ಎಂ. ವಿಶ್ವನಾಥ್, ನಗರಸಭೆ ಅಧ್ಯಕ್ಷ ಮೋಹನ್, ಬಜಿಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲ್ಲಳ್ಳಿ ಸುರೇಶ್, ನಗರ ಮಂಡಲ ಅಧ್ಯಕ್ಷ ವೇಣುಗೋಪಾಲ್ ಇತರರುಇದ್ದರು.

LEAVE A REPLY

Please enter your comment!
Please enter your name here