ತುಮಕೂರಿನ ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ

0

ತುಮಕೂರಿನ ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಹಾಸನದಲ್ಲಿ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿ. ಹಾಸನದ KSRTC ಬಸ್ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ಆ ಮಕ್ಕಳನ್ನು ಪಟ್ಟನಾಯಕನಹಳ್ಳಿ ಪೊಲೀಸರು ಹಾಸನ ಪೊಲೀಸರ ಸಹಕಾರದೊಂದಿಗೆ ರಕ್ಷಿಸಿ ನೊಂದ ಕುಟುಂಬದ ಸದಸ್ಯರ ಆಶಾಕಿರಣಗಳಾಗಿ ಹೊರ ಹೊಮ್ಮಿದ್ದಾರೆ ., ಅಂದಹಾಗೆ ಈ ಮಕ್ಕಳು

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ಒಂದೇ ಮನೆಯ ನಾಲ್ವರು ಮಕ್ಕಳಾಗಿದ್ದು ಮೊನ್ನೆ  ಶನಿವಾರ (ಮೇ 20)ರಂದು ನಾಪತ್ತೆಯಾಗಿ ಈ ಪ್ರಕರಣ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ತನಿಖಾ ಹಂತದಲ್ಲಿತ್ತು ., ಪೊಲೀಸರು ಇವರನ್ನು ಹುಡುಕಿದ ಸ್ಥಳ ಒಂದಲ್ಲ ಎರಡಲ್ಲ ;  ತುಮಕೂರು, ಚಿಕ್ಕಮಗಳೂರು, ಬೆಂಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹುಡುಕಾಡಿ ಹೈರಾಣಾಗಿದ್ದರು , ಕೊನೆಗೆ  ಹಾಸನದ KSRTC ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಪತ್ತೆಯಾಗಿ ಪ್ರಕರಣ ಸುಖಾಂತ್ಯ ಕಂಡಿದೆ ., ಈ ಬಗ್ಗೆ ಪಟ್ಟನಾಯಕಹಳ್ಳಿ DYSP ನವೀನ್ ನೇತೃತ್ವದಲ್ಲಿ ನಾಲ್ಕು ತಂಡಗಳು ಶ್ರಮಿಸಿವೆ ., ಇವರು ಓಡಿ ಬಂದ ವಿಷಯ ಕೇಳಿದರೆ ಆಶ್ಚರ್ಯ ಪಡುತ್ತೀರಾ …

ಕಳೆದ ಎರಡು ವರ್ಷಗಳಿಂದ ಬಾಲಕಿ ರಮೇಶ್ ಎಂಬಾತನನ್ನು ಪ್ರೀತಿಸುತ್ತಿದ್ದಳಂತೆ . ತಮ್ಮಿಬ್ಬರ ಪ್ರೀತಿಗೆ ಸಹಾಯ ಮಾಡಿದಕ್ಕೆ ಮೂವರು ಮಕ್ಕಳನ್ನು ಬಾಲಕಿ ತಮ್ಮ ಜತೆಯಲ್ಲೇ ಬೆಂಗಳೂರಿಗೆ ಕರೆದೊಯ್ದಿದ್ದಾಳಂತೆ . ಬಳಿಕ ಬೆಂಗಳೂರಿನಿಂದ ಹಾಸನಕ್ಕೆ ಬಂದಿದ್ದಾರೆ. ಇದೀಗ

ಪೊಲೀಸರ ಸತತ ಪ್ರಯತ್ನದಿಂದ ನಾಲ್ವರು ಮಕ್ಕಳನ್ನು ಪೊಲೀಸರು ಪತ್ತೆ ಮಾಡಿ ಈ ಹೈಲಾಟಕ್ಕೆ ಬ್ರೇಕ್ ಹಾಕಿದ್ದಾರೆ . ಮಕ್ಕಳ ಆಟ , ಪೋಷಕಿರಿಗೆ ಸಂಕಟ ಎಂಬತಾಗಿದೆ .,‌ಈ ಘಟನೆ .

LEAVE A REPLY

Please enter your comment!
Please enter your name here