ಸಾಮಾಜಿಕ ಜಾಲತಾಣಗಳ ಮುಖಾಂತರ ಸ್ಥಳೀಯ ಯುವಕರು ಪ್ರಜ್ವಲ್ ರೇವಣ್ಣ ಅವರ ಗಮನಕ್ಕೆ ಸ್ಥಳಕ್ಕೆ ಬೇಟಿ ಪರಿಶೀಲನೆ

0

ಬೇಲೂರು ತಾಲ್ಲೂಕಿನ ಬಿಕ್ಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಲವು ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮುಖಾಂತರ ಸ್ಥಳೀಯ ಯುವಕರು ಪ್ರಜ್ವಲ್ ರೇವಣ್ಣ ಅವರ ಗಮನಕ್ಕೆ ತಂದಿದ್ದರು.

ಇದನ್ನು ಮನಗೊಂಡು ಸಂಸದರು ಖುದ್ದಾಗಿ ಅಧಿಕಾರಿಗಳು ಮತ್ತು ಶಾಸಕರ ಜೊತೆ ಭೇಟಿ ನೀಡಿ ಆಸ್ಪತ್ರೆಯ ಕುಂದು ಕೊರತೆಗಳನ್ನು ಆಲಿಸಿ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ, ಇನ್ನು ಕೆಲವು ಸಮಸ್ಯೆಗಳನ್ನು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಯ ಜೊತೆ ಸಮಾಲೋಚಿಸಿ ಶೀಘ್ರ ಬಗೆಹರಿಸುವುದಾಗಿ ತಿಳಿಸಿದ್ದರು

ಈ ಸಂದರ್ಭದಲ್ಲಿ ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ಎನ್ ವಿ ನಟೇಶ್ ರವರು, ತಾಪಂ ಇಓ ರವಿಕುಮಾರ್ ರವರು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೇಲೂರು ತಾಲ್ಲೂಕಿನ ಅರೇಹಳ್ಳಿಯ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲನೆ
ನಂತರ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಕುಂದು ಕೊರತೆಗಳನ್ನು ಆಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳಿಗೆ ಸೂಚನೆ
ಈ ಸಂದರ್ಭದಲ್ಲಿ ಬೇಲೂರು ಶಾಸಕರಾದ ಕೆ. ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ನಟೇಶ್ ರವರು, ಇಓ ರವಿಕುಮಾರ್ ರವರು, ವೈದ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here