ಬೇಲೂರು ತಾಲ್ಲೂಕಿನ ಬಿಕ್ಕೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಕೆಲವು ಸಮಸ್ಯೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳ ಮುಖಾಂತರ ಸ್ಥಳೀಯ ಯುವಕರು ಪ್ರಜ್ವಲ್ ರೇವಣ್ಣ ಅವರ ಗಮನಕ್ಕೆ ತಂದಿದ್ದರು.
![](https://hassananews.com/wp-content/uploads/2021/06/FB_IMG_1622866717285.jpg)
ಇದನ್ನು ಮನಗೊಂಡು ಸಂಸದರು ಖುದ್ದಾಗಿ ಅಧಿಕಾರಿಗಳು ಮತ್ತು ಶಾಸಕರ ಜೊತೆ ಭೇಟಿ ನೀಡಿ ಆಸ್ಪತ್ರೆಯ ಕುಂದು ಕೊರತೆಗಳನ್ನು ಆಲಿಸಿ. ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ, ಇನ್ನು ಕೆಲವು ಸಮಸ್ಯೆಗಳನ್ನು ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಯ ಜೊತೆ ಸಮಾಲೋಚಿಸಿ ಶೀಘ್ರ ಬಗೆಹರಿಸುವುದಾಗಿ ತಿಳಿಸಿದ್ದರು
![](https://hassananews.com/wp-content/uploads/2021/06/FB_IMG_1622866714914-1024x552.jpg)
ಈ ಸಂದರ್ಭದಲ್ಲಿ ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ಎನ್ ವಿ ನಟೇಶ್ ರವರು, ತಾಪಂ ಇಓ ರವಿಕುಮಾರ್ ರವರು ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
![](https://hassananews.com/wp-content/uploads/2021/06/FB_IMG_1622866739592-1024x768.jpg)
ನಂತರ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಕುಂದು ಕೊರತೆಗಳನ್ನು ಆಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳಿಗೆ ಸೂಚನೆ
ಈ ಸಂದರ್ಭದಲ್ಲಿ ಬೇಲೂರು ಶಾಸಕರಾದ ಕೆ. ಎಸ್. ಲಿಂಗೇಶ್ ರವರು, ಉಪವಿಭಾಗಾಧಿಕಾರಿ ಗಿರೀಶ್ ನಂದನ್ ರವರು, ತಹಶೀಲ್ದಾರ್ ನಟೇಶ್ ರವರು, ಇಓ ರವಿಕುಮಾರ್ ರವರು, ವೈದ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.