ರಾಜಕೀಯ ಸಂಘರ್ಷಕ್ಕೆ ದಾರಿ ಈ ಕೊಲೆ ?: ಸಿಬಿಐ ತನಿಖೆಗೆ ಒಪ್ಪಿಸಲು ಸಾ.ರಾ.ಗೋವಿಂದ್ ಒತ್ತಾಯ

0

ಹಾಸನ:  ಪ್ರಶಾಂತ್ ನಾಗರಾಜ್ ಅವರ ಕೊಲೆ ರಾಜಕೀಯ ಪ್ರೇರಿತವೋ ರಾಜಕೀಯವೇ , ಒರತಾಗಿದೆಯೋ. ಇಲ್ಲಿಯ ಪೊಲೀಸರು ಇದನ್ನು ತನಿಖೆ ನಡೆಸುವುದು ಬೇಡ. ತನಿಖೆಯನ್ನು  CBIಗೆ ಒಪ್ಪಿಸಲಿ ಎಂದು ಡಾ.ರಾಜ್ ಕುಮಾರ್ ಅಭಿಮಾನಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಾ.ರಾ.ಗೋವಿಂದ್ ಒತ್ತಾಯ
ಪ್ರಶಾಂತ್ ಮೃತದೇಹದ ಅಂತಿಮ ದರ್ಶನ ಪಡೆಯಲು ನಗರದ ಹಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 


ಇದೊಂದು ರಾಜಕೀಯ ಪ್ರೇರಿತ ಕೊಲೆ. ಪ್ರಶಾಂತ್ ಅವರ ತಂದೆ ಹಾ.ರಾ.ನಾಗರಾಜ್ ಅವರನ್ನೂ ಕೊಲೆ ಮಾಡಲಾಗಿತ್ತು. ಪ್ರಶಾಂತ್ ತಂದೆಗೆ ತಕ್ಕ ಮಗನಂತೆ ಬದುಕಿದ್ದರು. ಪ್ರಶಾಂತ್ ಅವರ ತಂದೆ ಕೊಲೆಯಾದಾಗಲೂ ನಾನು ಬಂದಿದ್ದೆ ಎಂದು ನೆನಪಿಸಿದ ಅವರು, ಪ್ರಶಾಂತ್ ಹಾಗೂ ಅವರ ತಂದೆ ನಾಗರಾಜ್, ಡಾ.ರಾಜ್ಕುಮಾರ್ ಅವರ ಅಭಿಮಾನಿಯಾಗಿದ್ದರು.  ಪ್ರಶಾಂತ್ ಕೊಲೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಹಾಸನ ನಗರಸಭೆ ಸದಸ್ಯನ ಕೊಲೆ: ಪೊಲೀಸರ ವಜಾಕ್ಕೆ ರೇವಣ್ಣ ಪಟ್ಟು, ಬಿಗಿ ಬಂದೋಬಸ್ತ್
ಹಾಸನ: ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಕೊಲೆ ಪ್ರಕರಣ ಸಂಬಂಧ ತನಿಖೆ ಪೂರ್ಣ ಆಗುವವರೆಗೂ ನಗರದ ಮೂವರು ಪೊಲೀಸ್ ಅಧಿಕಾರಿಗಳನ್ನು ವಜಾ ಮಾಡಬೇಕು. ಅಲ್ಲಿಯವರೆಗೂ ಪ್ರಶಾಂತ್ ನಾಗರಾಜ್ ಅವರ ಅಂತ್ಯಕ್ರಿಯೆಗೆ ಅವಕಾಶ ನೀಡುವುದಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಪಟ್ಟುಹಿಡಿದಿದ್ದಾರೆ.
ನಗರದ ಸರ್ಕಲ್ ಇನ್ ಸ್ಪೆಕ್ಟರ್ ರೇಣುಕಾಪ್ರಸಾದ್, ಡಿವೈಎಸ್ಪಿ ಉದಯ ಭಾಸ್ಕರ್ ಹಾಗೂ ಸಬ್ ಇನ್ಸ್ಪೆಕ್ಟರ್ ಆರೋಗ್ಯಪ್ಪ ಅವರನ್ನು ವಜಾ ಮಾಡಬೇಕು ಎಂದು ರೇವಣ್ಣ ಒತ್ತಾಯಿಸಿದ್ದಾರೆ. 
ಬುಧವಾರ ರಾತ್ರಿ ನಗರದ ಜವೇನಹಳ್ಳಿ ಮಠ ಲಕ್ಷ್ಮಿಪುರ ಬಡಾವಣೆಯಲ್ಲಿ ಪ್ರಶಾಂತ್ ನಾಗರಾಜ್ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ರಾತ್ರಿ ಮನೆ ಬಳಿ ಸಾವಿರಾರು ಜನರು ಜಮಾಯಿಸಿದ್ದರು.

ನಗರದ ಸರ್ಕಾರಿ ಆಸ್ಪತ್ರೆ ( ಹಿಮ್ಸ್) ಶವಾಗಾರದಲ್ಲಿ ಮೃತದೇಹವನ್ನು ಇಡಲಾಗಿದೆ. ಆದರೆ, ಪೊಲೀಸ್ ಅಧಿಕಾರಿಗಳ ವಜಾ ಆಗುವವರೆಗೆ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್.ಡಿ. ರೇವಣ್ಣ ಪಟ್ಟು ಹಿಡಿದಿದ್ದಾರೆ. 
ಎಸ್ಪಿ ಶ್ರೀನಿವಾಸಗೌಡ ಆಸ್ಪತ್ರೆ ಬಳಿ ಇದ್ದು, ರೇವಣ್ಣ ಮನವೊಲಿಕೆಗೆ ಯತ್ನಿಸಿದರು. ಆದರೆ ರೇವಣ್ಣ ಪಟ್ಟು ಸಡಿಲಿಸಿಲ್ಲ.

ಮದ್ಯ ಮಾರಾಟ ನಿಷೇಧ:  ಪ್ರಶಾಂತ್ ಕೊಲೆ ಹಿನ್ನೆಲೆಯಲ್ಲಿ ಹಾಸನದಲ್ಲಿ ಗುರುವಾರ ಬೆಳಿಗ್ಗೆಯಿಂದ ಮಧ್ಯರಾತ್ರಿ 12ಗಂಟೆವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಪಾನಿಯ ಮಾರಾಟ ಮಳಿಗೆ, ಬಾರ್, ಡಾಬಾಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶಿಸಿದ್ದಾರೆ.  ಪೊಲೀಸರ ನಿಯೋಜನೆ:  ಜೆಡಿಎಸ್ ಮುಖಂಡ ಪ್ರಶಾಂತ್ ಹತ್ಯೆಯ ಬಳಿಕ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಭದ್ರತೆಗಾಗಿ ನಗರದಲ್ಲಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಶಾಂತ್ ಮೃತದೇಹ ಇರುವ ಹಿಮ್ಸ್ ಆಸ್ಪತ್ರೆಯ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ  ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಹೊರ ಜಿಲ್ಲೆಯಿಂದಲೂ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ.
ಮಾರುಕಟ್ಟೆ ಬಂದ್: ಪ್ರಶಾಂತ್ ಅವರು ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಹಣ್ಣಿನ ವ್ಯಾಪಾರಿಯಾಗಿದ್ದರು. ಈ ಹಿನ್ನೆಲೆ ಪ್ರಶಾಂತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಾಸನ ಕಟ್ಟಿನಕೆರೆ ಮಾರುಕಟ್ಟೆ ಬಂದ್ ಮಾಡಲಾಗಿದೆ.

LEAVE A REPLY

Please enter your comment!
Please enter your name here