ಮಂಜರಾಬಾದ್ ಕೋಟೆ ಸ್ವಚ್ಛತಾ ಕಾರ್ಯ: ವಿವಿದ ಸಂಘಟನೆಗಳ ಸಹಯೋಗ : ಸಕಲೇಶಪುರ:
ಕಂದಾಯ ಇಲಾಖೆ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಆನೇಮಹಲ್ ಗ್ರಾಮ ಪಂಚಾಯತಿ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಅಂಗವಾಗಿ ಟಿಪ್ಪು ಸುಲ್ತಾನ್ ನಿರ್ಮಿತ ಮಂಜರಾಬಾದ್ ಕೋಟೆ ಸ್ವಚ್ಚತಾ ಕಾರ್ಯ ಶನಿವಾರ ನಡೆಯಿತು.
![](https://hassananews.com/wp-content/uploads/2021/08/IMG-20210814-WA0060.jpg)
ಈ ಸಂದರ್ಭದಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಪ್ರತೀಕ್ ಭಾಯಲ್, ಸ್ವಚ್ಛತಾ ಆಂದೋಲನ ಮಹಾತ್ಮ ಗಾಂಧೀಜಿ ಅವರ ಕನಸಾಗಿತ್ತು ಈ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಮಂಜರಾಬಾದ್ ಕೋಟೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಕಲೇಶಪುರದಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳಗಳು ಇವೆ ಇವುಗಳನ್ನು ಸಂರಕ್ಷಿಸಿಕೊಳ್ಳುವುದು ಹಾಗೂ ಸ್ವಚ್ಛವಾಗಿಡುವುದು ನಮ್ಮಗಳ ಕರ್ತವ್ಯವಾಗಿದೆ ಎಂದರು.
![](https://hassananews.com/wp-content/uploads/2021/08/InShot_20210814_220052566.jpg)
ಇಲ್ಲಿಯ ಜನರು ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕೆಂದು ಪರಿಸರಕ್ಕೆ ಪೂರಕವಾಗಿ ಜೀವನ ಸಾಗಿಸಬೇಕೆಂದು ಕರೆ ನೀಡಿದರು. ತಹಸೀಲ್ದಾರ್ ಜಯಕುಮಾರ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವುದು ನಮ್ಮ ಕರ್ತವ್ಯ ವಾಗಿದೆ.
![](file:///storage/emulated/0/Pictures/inshot/InShot_20210814_220052566.jpg)
ಸಮಾಜದಲ್ಲಿ ಅರಿವು ಮೂಡಿಸುವ ಹಾಗೂ ಪರಿಸರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಸಾಂಕೇತಿಕವಾಗಿ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಅರುಣ್ ರಕ್ಷಿದಿ, ಕಾರ್ಯದರ್ಶಿ ರವಿಕುಮಾರ್, ಲಯನ್ಸ್ ಸಂಸ್ಥೆಯ ಅಧ್ಯಕ್ಷೆ ಮೀನಾಕ್ಷಿ ಖಾದರ್, ಕಾರ್ಯದರ್ಶಿ ಹರೀಶ್ ಮಂಜು, ಗ್ರಾಮ ಪಂಚಾಯತಿ ಸದಸ್ಯ ಹಸೈನಾರ್ ಆನೆಮಹಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.