ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದು!!!

0

ಕೋವಿಡ್-19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತಾರೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹಿತ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ.

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು.

ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಉಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೋಷಕರಿಗೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here