ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಉಚಿತ ನೀಡಲಾಗುವುದು (ಹೆಚ್ಚಿನ ಮಾಹಿತಿ)
ಹಾಸನ : (ಹಾಸನ್_ನ್ಯೂಸ್) !, (ಜ.2) ☑ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆವತಿಯಿಂದ ಶ್ರವಣದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
![](https://hassananews.com/wp-content/uploads/2021/01/anand-without-cover-usha-original-imafakfexecz4fa2.jpeg)
ಶ್ರವಣದೋಷವುಳ್ಳ ವ್ಯಕ್ತಿಯು ಭಾರತದ ಪ್ರಜೆಯಾಗಿರಬೇಕು ಹಾಗೂ ಕರ್ನಾಟಕದಲ್ಲಿ ಕನಿಷ್ಟ ಹಿಂದಿನ 10 ವರ್ಷಗಳ ನಿವಾಸಿಯಾಗಿರಬೇಕು. ಕನಿಷ್ಠ ಎಸ್.ಎಸ್.ಎಲ್.ಸಿ ವರೆಗೆ ವ್ಯಾಸಂಗ ಮಾಡಿರಬೇಕು ಹಾಗೂ ವೃತ್ತಿಗೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಸಲ್ಲಿಸಬೇಕು. ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿಯಿರುವುದಿಲ್ಲ.
ಈ ಯೋಜನೆಯಡಿ ಸೌಲಭ್ಯ ಪಡೆಯುವ ಶ್ರವಣದೋಷವುಳ್ಳ ಫಲಾನುಭವಿಗಳು ಬೇರೆ ಯಾವುದೇ ಮೂಲಗಳಿಂದ ಇದೇ ರೀತಿಯ ಸೌಲಭ್ಯ ಪಡೆದಿರಬಾರದು ಹಾಗೂ ಈ ಬಗ್ಗೆ ನೋಟರಿಯಿಂದ ದೃಢೀಕರಿಸಿದ ಪ್ರಮಾಣ ಪತ್ರ ಒದಗಿಸತಕ್ಕದ್ದು. ವಿಕಲಚೇತನತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಾಗಿರತಕ್ಕದ್ದು. ಕಡ್ಟಾಯವಾಗಿ ಸಂಬಂಧಪಟ್ಟ ತಹಸೀಲ್ದಾರರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ನೀಡಬೇಕು.
![](https://hassananews.com/wp-content/uploads/2021/01/Thinktank_Birmingham_-_object_1962S016171.jpg)
ಈ ಯೋಜನೆಯಡಿ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಸೌಲಭ್ಯ ನೀಡಲಾಗುವುದು, ಸೌಲಭ್ಯ ಪಡೆದ ನಂತರ ಬೇರೆಯವರಿಗೆ ಹಸ್ತಾಂತರಿಸಬಾರದು/ಪರೆಭಾರೆ ಮಾಡಬಾರದು ಈ ಕುರಿತು ದೃಢೀಕರಣ ನೀಡುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜ.28 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಲು ತಿಳಿಸಿದೆ.
#supporlocal #supportsmallbusiness