ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಜೂ.17 ನಾಳೆ ಹಾಸನ ಜಿಲ್ಲೆಗೆ ಬರಲಿದ್ದಾರೆ ; ಹೆಚ್ಚಿನ ಮಾಹಿತಿ 👇

0

ಕರ್ನಾಟಕ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಇದೇ ಮೊದಲ ಬಾರಿಗೆ ನಮ್ಮ ಹಾಸನ ಜಿಲ್ಲೆಗೆ ನಾಳೆ ಜೂ.17 ಶುಕ್ರವಾರ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದು

ಬೆಳಿಗ್ಗೆ 8 ಗಂಟೆಗೆ ಹಾಸನದ ಅತಿಥಿಗೃಹಕ್ಕೆ ಬಂದು , 8:45ಕ್ಕೆ ಬೇಲೂರಿನ ಚೆನ್ನಕೇಶವ ದೇವಾಲಯ ವೀಕ್ಷಣೆ ಮಾಡಿ. 9.30ಕ್ಕೆ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ ವೀಕ್ಷಣೆ ಮಾಡಿ. ನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ

ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿದ್ದಾರೆ. ಅವರು ಮಧ್ಯಪ್ರದೇಶದಿಂದ ಕರ್ನಾಟಕದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಮೊದಲ ವ್ಯಕ್ತಿ. ಜುಲೈ 6, 2021 ರಂದು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡು 2021 ರ ಜುಲೈ 11 ರಂದು ಅಧಿಕಾರ ವಹಿಸಿಕೊಂಡರು.ಅವರು 2014 ರಿಂದ 2021 ರವರೆಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಸಂಸತ್ತಿನ ಮೇಲ್ಮನೆಯಲ್ಲಿ ಸದನದ ನಾಯಕರಾಗಿದ್ದರು. ಅವರು ಸಂಸದೀಯ ಮಂಡಳಿ ಮತ್ತು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿದ್ದರು.

ಗೆಹ್ಲೋಟ್ ರವರು ಜನಿಸಿದ್ದು ಭಾರತದ ಮಧ್ಯಪ್ರದೇಶದ ನಾಗ್ಡಾದ ರುಪೆಟಾ ಗ್ರಾಮದಲ್ಲಿ. ಅವರದ್ದು ದಲಿತ ಕುಟುಂಬ. ಅವರು ಭಾರತೀಯ ಜನತಾ ಪಕ್ಷದ ಹಿರಿಯ ಸದಸ್ಯರಾಗಿದ್ದಾರೆ ಹಾಗೂ ಅವರು ಕೇಂದ್ರ ಸರ್ಕಾರದಲ್ಲಿ ಹಲವಾರು ಬಾರಿ ಮಂತ್ರಿ ಸ್ಥಾನ ಪಡೆದವರು.


LEAVE A REPLY

Please enter your comment!
Please enter your name here