ಗಮನಿಸಿ.! ಒಡಿಶಾ ಆಂಧ್ರದಲ್ಲಿ ‘ಅಸಾನಿ’ ಚಂಡಮಾರುತ ಪರಿಣಾಮ ಹಾಸನ ಸೇರಿ ರಾಜ್ಯದಲ್ಲಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್

0

ಗಮನಿಸಿ.! ‘ಅಸಾನಿ’ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ‘ಅಸಾನಿ’ ಚಂಡಮಾರುತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ವಿಶಾಖಪಟ್ಟಣ ಮತ್ತು ಒಡಿಶಾದ ಕರಾವಳಿಗೆ ಚಂಡಮಾರುತ ಧಾವಿಸಿದೆ. ಇದರಿಂದ ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇಂದು ಮೇ 11 ಬುಧವಾರ2022

ಒಡಿಶಾದಲ್ಲಿ ವಾಯುಭಾರ ಕುಸಿತ ಕಾರಣ ಚಂಡಮಾರುತ, ಹಾಸನ ಜಿಲ್ಲಾದ್ಯಂತ ಇಂದು ಬಹುತೇಕ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆ

ಹಾಸನದಲ್ಲಿಂದು ತಾಪಮಾನದಲ್ಲಿ ಬಾರಿ ಇಳಿಕೆಯಾಗಿದ್ದು 24’c ಗರಿಷ್ಠ ಕನಿಷ್ಠ 20’cಇದೆ , ನಾಳೆ 12ಮೇ ಇದೇ ವಾತಾವರಣ ಇರಲಿದೆ

ಹಾಸನ , ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ , ರಾಮನಗರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಹಾಸನದಲ್ಲಿ ಗಾಳಿಯ ವೇಗದಲ್ಲು ಕಳೆದ ವಾರಕ್ಕೆ ಹೋಲಿಸಿದರೆ ಹೆಚ್ಚಾಗಿದೆ , ಇಂದು 19ರಿಂದ 26km/hour ಇದೆ

ರಾಜ್ಯಾದ್ಯಂತ ಇಂದು-ನಾಳೆ ಮಳೆಯಾಗುವ ಸಾಧ್ಯತೆ ಇದ್ದು ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾಸನದಲ್ಲಿ ಮುಂದಿನ ಒಂದು ವಾರದಲ್ಲಿ ಕನಿಷ್ಠ 5ದಿನ ಮಳೆ ಸಾಧ್ಯತೆ ಇದೆ , ಅದೂ ಗುಡುಗು ಸಹಿತ

ಬೆಂಗಳೂರಿನ ಮೇಲೆ ಆಸಾನಿ ಚಂಡಮಾರುತದ ಪರಿಣಾಮ ಮಳೆಯಾಗುವ ಸಾಧ್ಯತೆ ಇದೆ. ಸೈಕ್ಲೋನ್ ನಿಂದ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಇಂದು ಮೋಡಮುಸುಕಿದ ವಾತಾವರಣ ಇರಲಿದೆ. ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಗಾಳಿ ಸಹಿತ ಮಳೆ ಆಗಲಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಇನ್ನೂ ಎರಡು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು ಬಿಟ್ಟು ಬೇರೆ ಎಲ್ಲ ಕಡೆಯೂ ಮಳೆಯಾಗಲಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here